Categories: ಕೋಲಾರ

ವರ್ತೂರ್ ಪ್ರಕಾಶ್ ಗೆ ನಾಲಿಗೆಗೂ ಮೆದುಳಿಗೂ ಸಂಪರ್ಕ ಇಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಗೆ ತಿಂಗಳು ಮಾಮೂಲಿ ಇಲ್ಲದೇ ಹೋಗಿದ್ದರಿಂದ ಬಾಯಿಗೆ ಬಂದಂತೆ ಮಾತಾಡತ್ತಾ ಇದ್ದಾರೆ ಅವರ ನಾಲಿಗೆಗೂ ಮತ್ತು ಮೆದುಳಿಗೂ ಸಂಪರ್ಕ ಇಲ್ಲದಂತೆ ಆಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು

ತಾಲೂಕಿನ ವೇಮಗಲ್ ನಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಧಿಕಾರದಲ್ಲಿ ಇದ್ದಷ್ಟು ದಿನ ಅಧಿಕಾರಿಗಳು ನೀಡುವ ಕಮಿಷನ್ ವರ್ತೂರು ಪ್ರಕಾಶ್ ಅವರಿಗೆ ಜೀವನವಾಗಿತ್ತು ನನಗೆ ಅಂತಹ ಪರಿಸ್ಥಿತಿ ಬೇಕಾಗಿಲ್ಲ ನನಗೆ ಕೋಟ್ಯಾಂತರ ರೂಪಾಯಿ ಬಾಡಿಗೆ ಬರುತ್ತದೆ ನಿನ್ನ ಅವಧಿಯಲ್ಲಿನ ಕಾಮಗಾರಿಗಳು ಮಾಡಕ್ಕೆ ಗುತ್ತಿಗೆದಾರರಿಂದ ಲಂಚ ಪಡೆದಿದ್ದು ಅವರೇ ಹೇಳಿದ್ದಾರೆ ನಾನು ಯಾರ ಹತ್ತಿರವಾದರೂ ಪಡೆದಿದ್ದರೆ ಸಾಬೀತು ಮಾಡಲಿ ಎಂದು ಸಾವಾಲು ಹಾಕಿದರು

ವರ್ತೂರು ಪ್ರಕಾಶ್ ಅವರು ಏನಾದರೂ ಮಾತಾಡಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿಕೊಳ್ಳುವುದೇ ಜೀವನವಾಗಿದೆ ಹಿಂದೆ ಸಿದ್ದರಾಮಯ್ಯ ಅವರ ವಿರುದ್ದ ಮಾತಾಡಿ ಮಾತಾಡಿ ಏನಾಗಿದೆ ಅಂತ ರಾಜ್ಯದ ಜನಕ್ಕೆ ಗೊತ್ತಿದೆ ಇನ್ನಾದರೂ ಅವರಿಗೆ ಒಳ್ಳೆಯ ಬುದ್ದಿ ಕೊಟ್ಟು ಒಳ್ಳೆಯದು ಮಾತಾಡಲಿ ಇಲ್ಲ ಯಾರು ತಪ್ಪು ಮಾಡಿದ್ದಾರೆ ಅಂತ ಅ ಕೋಲಾರಮ್ಮ ದೇವರು ನೋಡಿಕೊಳ್ಳಲಿ ಎಂದರು.

ಕಾಂಗ್ರೆಸ್ ಸರ್ಕಾರವು ಬರೀ ಅಭಿವೃದ್ಧಿಗೆ ಒತ್ತು ನೀಡುತ್ತದೆ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಬಡವರಿಗೆ ಮನೆಗಳು ಕೊಟ್ಟರು ಪಿಂಚಣಿ ಜಾರಿ ಮಾಡಿದರು ಸಿದ್ದರಾಮಯ್ಯ ಅಕ್ಕಿ ಕೊಟ್ಟಿದ್ದಾರೆ ಕಾಂಗ್ರೆಸ್ ಸರ್ಕಾರವು ಹಸಿವು ಮುಕ್ತ ಕರ್ನಾಟಕವೇ ಮುಖ್ಯ ಉದ್ದೇಶದಿಂದ ಇಂದಿರಾ ಕ್ಯಾಟೀನ್ ಸಹ ಜಾರಿ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇಲ್ಲದಾಗ ಮುಚ್ಚಿದ್ದರು ಇವಾಗ ಕಾಂಗ್ರೆಸ್ ಬಂದ ಮೇಲೆ ಮತ್ತೆ ಪ್ರಾರಂಭ ಮಾಡಿದ್ದಾರೆ ವೇಮಗಲ್ ನಲ್ಲಿ ಉಪ ನೋಂದಣಿ ಕೇಂದ್ರವನ್ನು ಮಾಡಲು ಈಗಾಗಲೇ ಅಧಿಕಾರಿಗಳು ಬಂದು ಹೋಗಿದ್ದಾರೆ ಮುಂದೆ ತಾಲೂಕು ಕೇಂದ್ರ ಮಾಡಲು ಸಹ ಅನುಮೋದನೆ ನೀಡಿದ್ದು ಮುಂದಿನ ದಿನಗಳಲ್ಲಿ ಆಗುತ್ತದೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ನೇರವಾಗಿ ಮಾತಾಡೋ ವ್ಯಕ್ತಿ ತಪ್ಪು ಇದ್ದರೆ ಪ್ರಶ್ನೆ ಮಾಡತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮಾತನಾಡಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತಾಲೂಕು ಮತ್ತು ಪಟ್ಟಣ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲಾಗಿದೆ ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಹೊಸದಾಗಿ ಪ್ರಾರಂಭ ಮಾಡಿದ್ದಾರೆ ಕೋಲಾರ ಕೇಂದ್ರದಲ್ಲಿ ಇರುವ ಕ್ಯಾಂಟೀನ್ ನಲ್ಲಿ ಅವ್ಯವಸ್ಥೆ ಇದೆ ಸರಿ ಪಡಿಸಬೇಕು ಇಂದಿರಾಗಾಂಧಿ ಅವರ ಹೆಸರು, ನೆನಪು, ಸಾಧನೆಗಳಿಗೆ ಗೌರವ ಕೊಡಬೇಕು ಬಡವರಿಗೆ ಅನುಕೂಲ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವರ್ಗಗಳಿಗೆ ಅನುಕೂಲ ಮಾಡಿದ್ದಾರೆ ಇಲ್ಲಿ ಸ್ವಚ್ಚತೆ ಕಾಪಾಡಿ ಹಸಿವು ಮುಕ್ತದ ಜೊತೆಗೆ ಗುಡಿಸಲು ಮುಕ್ತ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿ.ಎಂ ಮುನಿಯಪ್ಪ,
ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ವೆಂಕಟೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಉದಯಶಂಕರ್, ಮುನಿಅಂಜಿನಪ್ಪ, ಫಯಾಜ್, ಉರಟಅಗ್ರಹಾರ ಚೌಡರೆಡ್ಡಿ, ಶ್ರೀನಿವಾಸ್, ಶ್ರೀರಾಮ್, ಈರಣ್ಣ, ಮೈಲಾಂಡಹಳ್ಳಿ ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

4 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

2 days ago