Categories: ಕೋಲಾರ

ವರ್ತೂರ್ ಪ್ರಕಾಶ್ ಗೆ ನಾಲಿಗೆಗೂ ಮೆದುಳಿಗೂ ಸಂಪರ್ಕ ಇಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಗೆ ತಿಂಗಳು ಮಾಮೂಲಿ ಇಲ್ಲದೇ ಹೋಗಿದ್ದರಿಂದ ಬಾಯಿಗೆ ಬಂದಂತೆ ಮಾತಾಡತ್ತಾ ಇದ್ದಾರೆ ಅವರ ನಾಲಿಗೆಗೂ ಮತ್ತು ಮೆದುಳಿಗೂ ಸಂಪರ್ಕ ಇಲ್ಲದಂತೆ ಆಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು

ತಾಲೂಕಿನ ವೇಮಗಲ್ ನಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಧಿಕಾರದಲ್ಲಿ ಇದ್ದಷ್ಟು ದಿನ ಅಧಿಕಾರಿಗಳು ನೀಡುವ ಕಮಿಷನ್ ವರ್ತೂರು ಪ್ರಕಾಶ್ ಅವರಿಗೆ ಜೀವನವಾಗಿತ್ತು ನನಗೆ ಅಂತಹ ಪರಿಸ್ಥಿತಿ ಬೇಕಾಗಿಲ್ಲ ನನಗೆ ಕೋಟ್ಯಾಂತರ ರೂಪಾಯಿ ಬಾಡಿಗೆ ಬರುತ್ತದೆ ನಿನ್ನ ಅವಧಿಯಲ್ಲಿನ ಕಾಮಗಾರಿಗಳು ಮಾಡಕ್ಕೆ ಗುತ್ತಿಗೆದಾರರಿಂದ ಲಂಚ ಪಡೆದಿದ್ದು ಅವರೇ ಹೇಳಿದ್ದಾರೆ ನಾನು ಯಾರ ಹತ್ತಿರವಾದರೂ ಪಡೆದಿದ್ದರೆ ಸಾಬೀತು ಮಾಡಲಿ ಎಂದು ಸಾವಾಲು ಹಾಕಿದರು

ವರ್ತೂರು ಪ್ರಕಾಶ್ ಅವರು ಏನಾದರೂ ಮಾತಾಡಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿಕೊಳ್ಳುವುದೇ ಜೀವನವಾಗಿದೆ ಹಿಂದೆ ಸಿದ್ದರಾಮಯ್ಯ ಅವರ ವಿರುದ್ದ ಮಾತಾಡಿ ಮಾತಾಡಿ ಏನಾಗಿದೆ ಅಂತ ರಾಜ್ಯದ ಜನಕ್ಕೆ ಗೊತ್ತಿದೆ ಇನ್ನಾದರೂ ಅವರಿಗೆ ಒಳ್ಳೆಯ ಬುದ್ದಿ ಕೊಟ್ಟು ಒಳ್ಳೆಯದು ಮಾತಾಡಲಿ ಇಲ್ಲ ಯಾರು ತಪ್ಪು ಮಾಡಿದ್ದಾರೆ ಅಂತ ಅ ಕೋಲಾರಮ್ಮ ದೇವರು ನೋಡಿಕೊಳ್ಳಲಿ ಎಂದರು.

ಕಾಂಗ್ರೆಸ್ ಸರ್ಕಾರವು ಬರೀ ಅಭಿವೃದ್ಧಿಗೆ ಒತ್ತು ನೀಡುತ್ತದೆ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಬಡವರಿಗೆ ಮನೆಗಳು ಕೊಟ್ಟರು ಪಿಂಚಣಿ ಜಾರಿ ಮಾಡಿದರು ಸಿದ್ದರಾಮಯ್ಯ ಅಕ್ಕಿ ಕೊಟ್ಟಿದ್ದಾರೆ ಕಾಂಗ್ರೆಸ್ ಸರ್ಕಾರವು ಹಸಿವು ಮುಕ್ತ ಕರ್ನಾಟಕವೇ ಮುಖ್ಯ ಉದ್ದೇಶದಿಂದ ಇಂದಿರಾ ಕ್ಯಾಟೀನ್ ಸಹ ಜಾರಿ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇಲ್ಲದಾಗ ಮುಚ್ಚಿದ್ದರು ಇವಾಗ ಕಾಂಗ್ರೆಸ್ ಬಂದ ಮೇಲೆ ಮತ್ತೆ ಪ್ರಾರಂಭ ಮಾಡಿದ್ದಾರೆ ವೇಮಗಲ್ ನಲ್ಲಿ ಉಪ ನೋಂದಣಿ ಕೇಂದ್ರವನ್ನು ಮಾಡಲು ಈಗಾಗಲೇ ಅಧಿಕಾರಿಗಳು ಬಂದು ಹೋಗಿದ್ದಾರೆ ಮುಂದೆ ತಾಲೂಕು ಕೇಂದ್ರ ಮಾಡಲು ಸಹ ಅನುಮೋದನೆ ನೀಡಿದ್ದು ಮುಂದಿನ ದಿನಗಳಲ್ಲಿ ಆಗುತ್ತದೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ನೇರವಾಗಿ ಮಾತಾಡೋ ವ್ಯಕ್ತಿ ತಪ್ಪು ಇದ್ದರೆ ಪ್ರಶ್ನೆ ಮಾಡತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮಾತನಾಡಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತಾಲೂಕು ಮತ್ತು ಪಟ್ಟಣ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲಾಗಿದೆ ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಹೊಸದಾಗಿ ಪ್ರಾರಂಭ ಮಾಡಿದ್ದಾರೆ ಕೋಲಾರ ಕೇಂದ್ರದಲ್ಲಿ ಇರುವ ಕ್ಯಾಂಟೀನ್ ನಲ್ಲಿ ಅವ್ಯವಸ್ಥೆ ಇದೆ ಸರಿ ಪಡಿಸಬೇಕು ಇಂದಿರಾಗಾಂಧಿ ಅವರ ಹೆಸರು, ನೆನಪು, ಸಾಧನೆಗಳಿಗೆ ಗೌರವ ಕೊಡಬೇಕು ಬಡವರಿಗೆ ಅನುಕೂಲ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವರ್ಗಗಳಿಗೆ ಅನುಕೂಲ ಮಾಡಿದ್ದಾರೆ ಇಲ್ಲಿ ಸ್ವಚ್ಚತೆ ಕಾಪಾಡಿ ಹಸಿವು ಮುಕ್ತದ ಜೊತೆಗೆ ಗುಡಿಸಲು ಮುಕ್ತ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿ.ಎಂ ಮುನಿಯಪ್ಪ,
ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ವೆಂಕಟೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಉದಯಶಂಕರ್, ಮುನಿಅಂಜಿನಪ್ಪ, ಫಯಾಜ್, ಉರಟಅಗ್ರಹಾರ ಚೌಡರೆಡ್ಡಿ, ಶ್ರೀನಿವಾಸ್, ಶ್ರೀರಾಮ್, ಈರಣ್ಣ, ಮೈಲಾಂಡಹಳ್ಳಿ ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago