Categories: ಕೋಲಾರ

ವರ್ತೂರ್ ಪ್ರಕಾಶ್ ಗೆ ನಾಲಿಗೆಗೂ ಮೆದುಳಿಗೂ ಸಂಪರ್ಕ ಇಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಗೆ ತಿಂಗಳು ಮಾಮೂಲಿ ಇಲ್ಲದೇ ಹೋಗಿದ್ದರಿಂದ ಬಾಯಿಗೆ ಬಂದಂತೆ ಮಾತಾಡತ್ತಾ ಇದ್ದಾರೆ ಅವರ ನಾಲಿಗೆಗೂ ಮತ್ತು ಮೆದುಳಿಗೂ ಸಂಪರ್ಕ ಇಲ್ಲದಂತೆ ಆಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು

ತಾಲೂಕಿನ ವೇಮಗಲ್ ನಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಧಿಕಾರದಲ್ಲಿ ಇದ್ದಷ್ಟು ದಿನ ಅಧಿಕಾರಿಗಳು ನೀಡುವ ಕಮಿಷನ್ ವರ್ತೂರು ಪ್ರಕಾಶ್ ಅವರಿಗೆ ಜೀವನವಾಗಿತ್ತು ನನಗೆ ಅಂತಹ ಪರಿಸ್ಥಿತಿ ಬೇಕಾಗಿಲ್ಲ ನನಗೆ ಕೋಟ್ಯಾಂತರ ರೂಪಾಯಿ ಬಾಡಿಗೆ ಬರುತ್ತದೆ ನಿನ್ನ ಅವಧಿಯಲ್ಲಿನ ಕಾಮಗಾರಿಗಳು ಮಾಡಕ್ಕೆ ಗುತ್ತಿಗೆದಾರರಿಂದ ಲಂಚ ಪಡೆದಿದ್ದು ಅವರೇ ಹೇಳಿದ್ದಾರೆ ನಾನು ಯಾರ ಹತ್ತಿರವಾದರೂ ಪಡೆದಿದ್ದರೆ ಸಾಬೀತು ಮಾಡಲಿ ಎಂದು ಸಾವಾಲು ಹಾಕಿದರು

ವರ್ತೂರು ಪ್ರಕಾಶ್ ಅವರು ಏನಾದರೂ ಮಾತಾಡಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿಕೊಳ್ಳುವುದೇ ಜೀವನವಾಗಿದೆ ಹಿಂದೆ ಸಿದ್ದರಾಮಯ್ಯ ಅವರ ವಿರುದ್ದ ಮಾತಾಡಿ ಮಾತಾಡಿ ಏನಾಗಿದೆ ಅಂತ ರಾಜ್ಯದ ಜನಕ್ಕೆ ಗೊತ್ತಿದೆ ಇನ್ನಾದರೂ ಅವರಿಗೆ ಒಳ್ಳೆಯ ಬುದ್ದಿ ಕೊಟ್ಟು ಒಳ್ಳೆಯದು ಮಾತಾಡಲಿ ಇಲ್ಲ ಯಾರು ತಪ್ಪು ಮಾಡಿದ್ದಾರೆ ಅಂತ ಅ ಕೋಲಾರಮ್ಮ ದೇವರು ನೋಡಿಕೊಳ್ಳಲಿ ಎಂದರು.

ಕಾಂಗ್ರೆಸ್ ಸರ್ಕಾರವು ಬರೀ ಅಭಿವೃದ್ಧಿಗೆ ಒತ್ತು ನೀಡುತ್ತದೆ ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಬಡವರಿಗೆ ಮನೆಗಳು ಕೊಟ್ಟರು ಪಿಂಚಣಿ ಜಾರಿ ಮಾಡಿದರು ಸಿದ್ದರಾಮಯ್ಯ ಅಕ್ಕಿ ಕೊಟ್ಟಿದ್ದಾರೆ ಕಾಂಗ್ರೆಸ್ ಸರ್ಕಾರವು ಹಸಿವು ಮುಕ್ತ ಕರ್ನಾಟಕವೇ ಮುಖ್ಯ ಉದ್ದೇಶದಿಂದ ಇಂದಿರಾ ಕ್ಯಾಟೀನ್ ಸಹ ಜಾರಿ ಮಾಡಿದ್ದಾರೆ ಕಾಂಗ್ರೆಸ್ ಸರ್ಕಾರ ಇಲ್ಲದಾಗ ಮುಚ್ಚಿದ್ದರು ಇವಾಗ ಕಾಂಗ್ರೆಸ್ ಬಂದ ಮೇಲೆ ಮತ್ತೆ ಪ್ರಾರಂಭ ಮಾಡಿದ್ದಾರೆ ವೇಮಗಲ್ ನಲ್ಲಿ ಉಪ ನೋಂದಣಿ ಕೇಂದ್ರವನ್ನು ಮಾಡಲು ಈಗಾಗಲೇ ಅಧಿಕಾರಿಗಳು ಬಂದು ಹೋಗಿದ್ದಾರೆ ಮುಂದೆ ತಾಲೂಕು ಕೇಂದ್ರ ಮಾಡಲು ಸಹ ಅನುಮೋದನೆ ನೀಡಿದ್ದು ಮುಂದಿನ ದಿನಗಳಲ್ಲಿ ಆಗುತ್ತದೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ನೇರವಾಗಿ ಮಾತಾಡೋ ವ್ಯಕ್ತಿ ತಪ್ಪು ಇದ್ದರೆ ಪ್ರಶ್ನೆ ಮಾಡತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮಾತನಾಡಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತಾಲೂಕು ಮತ್ತು ಪಟ್ಟಣ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲಾಗಿದೆ ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಹೊಸದಾಗಿ ಪ್ರಾರಂಭ ಮಾಡಿದ್ದಾರೆ ಕೋಲಾರ ಕೇಂದ್ರದಲ್ಲಿ ಇರುವ ಕ್ಯಾಂಟೀನ್ ನಲ್ಲಿ ಅವ್ಯವಸ್ಥೆ ಇದೆ ಸರಿ ಪಡಿಸಬೇಕು ಇಂದಿರಾಗಾಂಧಿ ಅವರ ಹೆಸರು, ನೆನಪು, ಸಾಧನೆಗಳಿಗೆ ಗೌರವ ಕೊಡಬೇಕು ಬಡವರಿಗೆ ಅನುಕೂಲ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವರ್ಗಗಳಿಗೆ ಅನುಕೂಲ ಮಾಡಿದ್ದಾರೆ ಇಲ್ಲಿ ಸ್ವಚ್ಚತೆ ಕಾಪಾಡಿ ಹಸಿವು ಮುಕ್ತದ ಜೊತೆಗೆ ಗುಡಿಸಲು ಮುಕ್ತ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿ.ಎಂ ಮುನಿಯಪ್ಪ,
ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ವೆಂಕಟೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಉದಯಶಂಕರ್, ಮುನಿಅಂಜಿನಪ್ಪ, ಫಯಾಜ್, ಉರಟಅಗ್ರಹಾರ ಚೌಡರೆಡ್ಡಿ, ಶ್ರೀನಿವಾಸ್, ಶ್ರೀರಾಮ್, ಈರಣ್ಣ, ಮೈಲಾಂಡಹಳ್ಳಿ ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

13 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

16 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago