ವರ್ಷದೊಳಗೆ ಮುದುಗುರ್ಕಿಗೆ ವ್ಯವಸ್ಥಿತ ರಸ್ತೆ ಸಂಪರ್ಕ- ಸಚಿವ ಕೆ.ಎಚ್.ಮುನಿಯಪ್ಪ

ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದು, ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಮೇ.7ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ದೇವನಹಳ್ಳಿಯ ಮುದುಗುರ್ಕಿ ಗ್ರಾಮಕ್ಕೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಭೇಟಿ ನೀಡಿ ಅಪಘಾತದಿಂದ ಸಾವನಪ್ಪಿದ ಮೃತ ಸುಧಾಕರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಘಟನಾ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಸ್ಥಳದಲ್ಲಿ ಈ ಹಿಂದೆ ಅನೇಕ ಅಪಘಾತಗಳಲ್ಲಿ ಹಲವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂಡರ್ ಪಾಸ್ (ಕೆಳಸೇತುವೆ)ಗೆ ಆಗ್ರಹಿಸಿದ ಆ ಭಾಗದ ಮುಖಂಡರು, ಸಾರ್ವಜನಿಕರು ಸಮಸ್ಯೆ ಇತ್ಯರ್ಥಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವರಾದ ಕೆ.ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಸಚಿವರು, ಮುದಗುರ್ಕಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ,ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದು ತಿಳಿಸಿದರು.

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಂಧ್ರದ ಪೆನುಗೊಂಡ ವರಗೆ 2400 ಕೋಟಿ ರೂ. ವೆಚ್ಚದಲ್ಲಿ 10 ಪಥದ ರಸ್ತೆ ನಿರ್ಮಾಣ ಮಾರ್ಚ್ ನಿಂದ ಆರಂಭಗೊಳ್ಳುತಿದ್ದು, ಎಲ್ಲಾ ಪ್ರಮುಖ ಗ್ರಾಮಗಳಲ್ಲಿ ಬೆಂಗಳೂರು ಮೈಸೂರು ಹೈವೇ ಮಾದರಿಯಲ್ಲಿ ಅಂಡರ್ ಪಾಸ್ ಗಳು ಆಗಲಿದ್ದು ಶಾಶ್ವತ ಪರಿಹಾರ ಸಿಗಲಿದೆ ಎಂದರು.

ತಕ್ಷಣದ ಕ್ರಮವಾಗಿ ಮುದುಗುರ್ಕಿಯಿಂದ ಆವತಿವರಗೆ ರಸ್ತೆ ಬದಿಯಲ್ಲಿ ಲಾರಿ ಸೇರಿದಂತೆ ಇತರೆ ವಾಹನಗಳ ನಿಲುಗಡೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಕಾನೂನಿನ ಪ್ರಕಾರ ರಸ್ತೆಯನ್ನು ಈ ರೀತಿ ತೆರವು ಮಾಡಲು ಅವಕಾಶವಿಲ್ಲ,‌ ತಾತ್ಕಾಲಿಕವಾಗಿ ಟ್ರಾಫಿಕ್ ಪೊಲೀಸ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲಿದ್ದಾರೆ ಎಂದರು. ಹಾಗೂ ಹೈಮಾಸ್ಟ್ ದೀಪಕ್ಕೂ ವ್ಯವಸ್ಥೆ ಮಾಡಲು ಸೂಚಿಸಲಾಗುವುದೆಂದರು.

ಹತ್ತು ಪಥದ ರಸ್ತೆ ನಿರ್ಮಾಣ ಆಗಲಿದೆ. ಆಗ ಪ್ರತಿಯೊಂದು ಹಳ್ಳಿಗಳಿಗೂ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಅಲ್ಲಿಯವರಗೆ ತಾತ್ಕಾಲಿಕ ಪರಿಹಾರ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಯಾವುದೇ ವಾಹನಗಳನ್ನ ನಿಲ್ಲಿಸದಂತೆ ಪೊಲೀಸರಿಗೆ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಜಯಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ ಉಪಾಧ್ಯಕ್ಷ ನಾರಾಯಣ ಸ್ವಾಮಿ, ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

19 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

1 hour ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago