ವರ್ಷದೊಳಗೆ ಮುದುಗುರ್ಕಿಗೆ ವ್ಯವಸ್ಥಿತ ರಸ್ತೆ ಸಂಪರ್ಕ- ಸಚಿವ ಕೆ.ಎಚ್.ಮುನಿಯಪ್ಪ

ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದು, ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಮೇ.7ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ದೇವನಹಳ್ಳಿಯ ಮುದುಗುರ್ಕಿ ಗ್ರಾಮಕ್ಕೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಭೇಟಿ ನೀಡಿ ಅಪಘಾತದಿಂದ ಸಾವನಪ್ಪಿದ ಮೃತ ಸುಧಾಕರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಘಟನಾ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಸ್ಥಳದಲ್ಲಿ ಈ ಹಿಂದೆ ಅನೇಕ ಅಪಘಾತಗಳಲ್ಲಿ ಹಲವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂಡರ್ ಪಾಸ್ (ಕೆಳಸೇತುವೆ)ಗೆ ಆಗ್ರಹಿಸಿದ ಆ ಭಾಗದ ಮುಖಂಡರು, ಸಾರ್ವಜನಿಕರು ಸಮಸ್ಯೆ ಇತ್ಯರ್ಥಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವರಾದ ಕೆ.ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಸಚಿವರು, ಮುದಗುರ್ಕಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ,ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದು ತಿಳಿಸಿದರು.

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಂಧ್ರದ ಪೆನುಗೊಂಡ ವರಗೆ 2400 ಕೋಟಿ ರೂ. ವೆಚ್ಚದಲ್ಲಿ 10 ಪಥದ ರಸ್ತೆ ನಿರ್ಮಾಣ ಮಾರ್ಚ್ ನಿಂದ ಆರಂಭಗೊಳ್ಳುತಿದ್ದು, ಎಲ್ಲಾ ಪ್ರಮುಖ ಗ್ರಾಮಗಳಲ್ಲಿ ಬೆಂಗಳೂರು ಮೈಸೂರು ಹೈವೇ ಮಾದರಿಯಲ್ಲಿ ಅಂಡರ್ ಪಾಸ್ ಗಳು ಆಗಲಿದ್ದು ಶಾಶ್ವತ ಪರಿಹಾರ ಸಿಗಲಿದೆ ಎಂದರು.

ತಕ್ಷಣದ ಕ್ರಮವಾಗಿ ಮುದುಗುರ್ಕಿಯಿಂದ ಆವತಿವರಗೆ ರಸ್ತೆ ಬದಿಯಲ್ಲಿ ಲಾರಿ ಸೇರಿದಂತೆ ಇತರೆ ವಾಹನಗಳ ನಿಲುಗಡೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಕಾನೂನಿನ ಪ್ರಕಾರ ರಸ್ತೆಯನ್ನು ಈ ರೀತಿ ತೆರವು ಮಾಡಲು ಅವಕಾಶವಿಲ್ಲ,‌ ತಾತ್ಕಾಲಿಕವಾಗಿ ಟ್ರಾಫಿಕ್ ಪೊಲೀಸ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲಿದ್ದಾರೆ ಎಂದರು. ಹಾಗೂ ಹೈಮಾಸ್ಟ್ ದೀಪಕ್ಕೂ ವ್ಯವಸ್ಥೆ ಮಾಡಲು ಸೂಚಿಸಲಾಗುವುದೆಂದರು.

ಹತ್ತು ಪಥದ ರಸ್ತೆ ನಿರ್ಮಾಣ ಆಗಲಿದೆ. ಆಗ ಪ್ರತಿಯೊಂದು ಹಳ್ಳಿಗಳಿಗೂ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಅಲ್ಲಿಯವರಗೆ ತಾತ್ಕಾಲಿಕ ಪರಿಹಾರ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಯಾವುದೇ ವಾಹನಗಳನ್ನ ನಿಲ್ಲಿಸದಂತೆ ಪೊಲೀಸರಿಗೆ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಜಯಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ ಉಪಾಧ್ಯಕ್ಷ ನಾರಾಯಣ ಸ್ವಾಮಿ, ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

7 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

11 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

11 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

13 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

14 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

17 hours ago