Categories: ಕೋಲಾರ

ವರ್ಷದೊಳಗೆ ವಾಸವಿ ಸಮುದಾಯ ಭವನ ನಿರ್ಮಾಣ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ಹಾಗೂ ವಾಸವಿ ಯುವಜನ ಸಂಘದಿಂದ ನಡೆದ ವಾಸವಿ ಜಯಂತಿ, ಶ್ರೀನಿವಾಸ ಕಲ್ಯಾಣೋತ್ಸವ, ಹಾಗೂ ಪುಷ್ಪ ಯಾಗಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಹೃದಯ ಭಾಗದಲ್ಲಿ ಇರುವ ವಾಸವಿ ಮಾತೆಯು ಎಲ್ಲರಿಗೂ ಒಳ್ಳೆಯದು ಮಾಡಲಿ, ಮನುಷ್ಯ ಯಾರಿಗೂ ಕೆಡುಕನ್ನು ಬಯಸದೆ ನ್ಯಾಯ, ನೀತಿ, ಧರ್ಮದಿಂದ ಕೈಲಾದ ಸಹಾಯವನ್ನು ಮಾಡುವಂತಹ ಶಕ್ತಿಯನ್ನು ದೇವರು ಎಲ್ಲರಿಗೂ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಸಾಕಷ್ಟು ಜನರು ರಾಜಕೀಯವನ್ನು ಪ್ರವೇಶ ಮಾಡಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರಂತೆಯೇ ನಾನು ಕೆಲಸ ಮಾಡಲು ಬಂದಿದ್ದೇನೆ. ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕೊರತೆಯಿಲ್ಲ. ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ವಾಸವಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಅಗತ್ಯ ನೆರವಿನ ಜೊತೆಗೆ ನಿಮ್ಮ ಜೊತೆಯಲ್ಲಿ ನಾನು ಇದ್ದು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜನರ ಸೇವೆ ಮಾಡಲು ಎಲ್ಲರಿಗೂ ಅವಕಾಶವನ್ನು ನೀಡುವುದಿಲ್ಲ. ಆದರೆ, ನಿಮ್ಮಗಳ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಿದ್ದಾರೆ. ನಾವು ಅಭಿವೃದ್ಧಿಯ ಪರವಾಗಿ ಯಾವುದೇ ಮೋಸ ವಂಚನೆಯಿಲ್ಲದೇ ಭ್ರಷ್ಟಾಚಾರವಿಲ್ಲದ ರೀತಿಯಲ್ಲಿ ಸರಕಾರದ ಅನುದಾನವನ್ನು ಹಾಗೂ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲು ದೇವರು ಆಶೀರ್ವಾದ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೋಲಾರ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಈಗಾಗಲೇ 200 ಕೋಟಿ ಅನುದಾನವನ್ನು ನೀಡಿದ್ದಾರೆ. ವಾಸವಿ ಸಮುದಾಯದ ಅಭಿವೃದ್ಧಿಗೆ ಮನವಿ ಕೊಟ್ಟಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡತ್ತೇವೆ. ನಿಮ್ಮೊಂದಿಗೆ ಕಾಂಗ್ರೆಸ್ ಸರಕಾರ ಮತ್ತು ಇನ್ನೂ ಉಳಿದ ಜನಪ್ರತಿನಿಧಿಗಳ ಸಹಕಾರವು ಖಂಡಿತವಾಗಿ ಇರುತ್ತದೆ ಎಂದರು

ಈ ಸಂದರ್ಭದಲ್ಲಿ ಅರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎನ್.ಸಿ ಸತೀಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಬದ್ರೀನಾಥ್, ಚಲಪತಿ, ರಾಘವೇಂದ್ರ ಬಾಲಾಜಿ, ವೆಂಕಟೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ.ಶಿವಕುಮಾರ್, ಚಿಂಟು ಮುಂತಾದವರು ಇದ್ದರು

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago