Categories: ಕೋಲಾರ

ವರ್ಷದೊಳಗೆ ವಾಸವಿ ಸಮುದಾಯ ಭವನ ನಿರ್ಮಾಣ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ಹಾಗೂ ವಾಸವಿ ಯುವಜನ ಸಂಘದಿಂದ ನಡೆದ ವಾಸವಿ ಜಯಂತಿ, ಶ್ರೀನಿವಾಸ ಕಲ್ಯಾಣೋತ್ಸವ, ಹಾಗೂ ಪುಷ್ಪ ಯಾಗಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಹೃದಯ ಭಾಗದಲ್ಲಿ ಇರುವ ವಾಸವಿ ಮಾತೆಯು ಎಲ್ಲರಿಗೂ ಒಳ್ಳೆಯದು ಮಾಡಲಿ, ಮನುಷ್ಯ ಯಾರಿಗೂ ಕೆಡುಕನ್ನು ಬಯಸದೆ ನ್ಯಾಯ, ನೀತಿ, ಧರ್ಮದಿಂದ ಕೈಲಾದ ಸಹಾಯವನ್ನು ಮಾಡುವಂತಹ ಶಕ್ತಿಯನ್ನು ದೇವರು ಎಲ್ಲರಿಗೂ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಸಾಕಷ್ಟು ಜನರು ರಾಜಕೀಯವನ್ನು ಪ್ರವೇಶ ಮಾಡಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರಂತೆಯೇ ನಾನು ಕೆಲಸ ಮಾಡಲು ಬಂದಿದ್ದೇನೆ. ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕೊರತೆಯಿಲ್ಲ. ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ವಾಸವಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಅಗತ್ಯ ನೆರವಿನ ಜೊತೆಗೆ ನಿಮ್ಮ ಜೊತೆಯಲ್ಲಿ ನಾನು ಇದ್ದು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜನರ ಸೇವೆ ಮಾಡಲು ಎಲ್ಲರಿಗೂ ಅವಕಾಶವನ್ನು ನೀಡುವುದಿಲ್ಲ. ಆದರೆ, ನಿಮ್ಮಗಳ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಿದ್ದಾರೆ. ನಾವು ಅಭಿವೃದ್ಧಿಯ ಪರವಾಗಿ ಯಾವುದೇ ಮೋಸ ವಂಚನೆಯಿಲ್ಲದೇ ಭ್ರಷ್ಟಾಚಾರವಿಲ್ಲದ ರೀತಿಯಲ್ಲಿ ಸರಕಾರದ ಅನುದಾನವನ್ನು ಹಾಗೂ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲು ದೇವರು ಆಶೀರ್ವಾದ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೋಲಾರ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಈಗಾಗಲೇ 200 ಕೋಟಿ ಅನುದಾನವನ್ನು ನೀಡಿದ್ದಾರೆ. ವಾಸವಿ ಸಮುದಾಯದ ಅಭಿವೃದ್ಧಿಗೆ ಮನವಿ ಕೊಟ್ಟಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡತ್ತೇವೆ. ನಿಮ್ಮೊಂದಿಗೆ ಕಾಂಗ್ರೆಸ್ ಸರಕಾರ ಮತ್ತು ಇನ್ನೂ ಉಳಿದ ಜನಪ್ರತಿನಿಧಿಗಳ ಸಹಕಾರವು ಖಂಡಿತವಾಗಿ ಇರುತ್ತದೆ ಎಂದರು

ಈ ಸಂದರ್ಭದಲ್ಲಿ ಅರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎನ್.ಸಿ ಸತೀಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಬದ್ರೀನಾಥ್, ಚಲಪತಿ, ರಾಘವೇಂದ್ರ ಬಾಲಾಜಿ, ವೆಂಕಟೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ.ಶಿವಕುಮಾರ್, ಚಿಂಟು ಮುಂತಾದವರು ಇದ್ದರು

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago