Categories: ಕೋಲಾರ

ವರ್ಷದೊಳಗೆ ವಾಸವಿ ಸಮುದಾಯ ಭವನ ನಿರ್ಮಾಣ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ಹಾಗೂ ವಾಸವಿ ಯುವಜನ ಸಂಘದಿಂದ ನಡೆದ ವಾಸವಿ ಜಯಂತಿ, ಶ್ರೀನಿವಾಸ ಕಲ್ಯಾಣೋತ್ಸವ, ಹಾಗೂ ಪುಷ್ಪ ಯಾಗಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಹೃದಯ ಭಾಗದಲ್ಲಿ ಇರುವ ವಾಸವಿ ಮಾತೆಯು ಎಲ್ಲರಿಗೂ ಒಳ್ಳೆಯದು ಮಾಡಲಿ, ಮನುಷ್ಯ ಯಾರಿಗೂ ಕೆಡುಕನ್ನು ಬಯಸದೆ ನ್ಯಾಯ, ನೀತಿ, ಧರ್ಮದಿಂದ ಕೈಲಾದ ಸಹಾಯವನ್ನು ಮಾಡುವಂತಹ ಶಕ್ತಿಯನ್ನು ದೇವರು ಎಲ್ಲರಿಗೂ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಸಾಕಷ್ಟು ಜನರು ರಾಜಕೀಯವನ್ನು ಪ್ರವೇಶ ಮಾಡಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರಂತೆಯೇ ನಾನು ಕೆಲಸ ಮಾಡಲು ಬಂದಿದ್ದೇನೆ. ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕೊರತೆಯಿಲ್ಲ. ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ವಾಸವಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಅಗತ್ಯ ನೆರವಿನ ಜೊತೆಗೆ ನಿಮ್ಮ ಜೊತೆಯಲ್ಲಿ ನಾನು ಇದ್ದು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜನರ ಸೇವೆ ಮಾಡಲು ಎಲ್ಲರಿಗೂ ಅವಕಾಶವನ್ನು ನೀಡುವುದಿಲ್ಲ. ಆದರೆ, ನಿಮ್ಮಗಳ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಿದ್ದಾರೆ. ನಾವು ಅಭಿವೃದ್ಧಿಯ ಪರವಾಗಿ ಯಾವುದೇ ಮೋಸ ವಂಚನೆಯಿಲ್ಲದೇ ಭ್ರಷ್ಟಾಚಾರವಿಲ್ಲದ ರೀತಿಯಲ್ಲಿ ಸರಕಾರದ ಅನುದಾನವನ್ನು ಹಾಗೂ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲು ದೇವರು ಆಶೀರ್ವಾದ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೋಲಾರ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಈಗಾಗಲೇ 200 ಕೋಟಿ ಅನುದಾನವನ್ನು ನೀಡಿದ್ದಾರೆ. ವಾಸವಿ ಸಮುದಾಯದ ಅಭಿವೃದ್ಧಿಗೆ ಮನವಿ ಕೊಟ್ಟಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡತ್ತೇವೆ. ನಿಮ್ಮೊಂದಿಗೆ ಕಾಂಗ್ರೆಸ್ ಸರಕಾರ ಮತ್ತು ಇನ್ನೂ ಉಳಿದ ಜನಪ್ರತಿನಿಧಿಗಳ ಸಹಕಾರವು ಖಂಡಿತವಾಗಿ ಇರುತ್ತದೆ ಎಂದರು

ಈ ಸಂದರ್ಭದಲ್ಲಿ ಅರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎನ್.ಸಿ ಸತೀಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಬದ್ರೀನಾಥ್, ಚಲಪತಿ, ರಾಘವೇಂದ್ರ ಬಾಲಾಜಿ, ವೆಂಕಟೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ.ಶಿವಕುಮಾರ್, ಚಿಂಟು ಮುಂತಾದವರು ಇದ್ದರು

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

5 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

8 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

20 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

21 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

24 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago