ವಸತಿಯಲ್ಲಿ ಶಾಲೆಯಲ್ಲಿ ಓದುತ್ತಿದ್ದ ಮಗಳನ್ನು ನೋಡಲು ಬರುತ್ತಿದ್ದ ಪೋಷಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನ್ನಪ್ಪಿದ್ದು, ತಾಯಿಗೆ ತೀವ್ರ ಗಾಯಗಳಾದ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿರುವ ಘಟನೆ ಗೌರಿಬಿದನೂರು ತಾಲೂಕಿನ ತಾಲೂಕಿನ ವಾಟದಹೊಸಹಳ್ಳಿ ಬಳಿಯ ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ವೆಂಕಟೇಶ್ ಮೃತಪಟ್ಟಿದ್ದು, ಅವರ ಪತ್ನಿ ಭಾರತಿ ಅವರಿಗೆ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದು ಭಾನುವಾರ ಶಾಲೆಗೆ ರಜೆ ಹಿನ್ನೆಲೆ ಬಾಗೇಪಲ್ಲಿಯಿಂದ ಗೌರಿಬಿದನೂರು ವಸತಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಗಳನ್ನು ನೋಡಲು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಇಂದು ಮಧ್ಯಾಹ್ನ 3:30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…