ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;

• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 hour ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

3 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

6 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

15 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago