ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;
• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.
• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.
• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.
• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…