ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;

• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

Ramesh Babu

Journalist

Recent Posts

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

1 hour ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

2 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

12 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

1 day ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

2 days ago