ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

11 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

13 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago