ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

8 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

9 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

21 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

23 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

23 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago