ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago