ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.
ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…