ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

14 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

15 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

19 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago