ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

6 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago