ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.
ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…