ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.
ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…