ವಸತಿ ರಹಿತ ನೇಕಾರರಿಂದ ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ, ವಿದ್ಯುತ್‌ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಕೆಗಳಲ್ಲಿ ತೊಡಗಿರುವ ನೇಕಾರರು ವಸತಿ ಕಾರ್ಯಗಾರ ಯೋಜನೆಯಡಿ ನೇಕಾರಿಕೆ ವೃತ್ತಿಯಲ್ಲಿ ನಿರತರಾಗಿರುವ ಈ ಹಿಂದೆ ಸರ್ಕಾರದ ಯಾವುದೇ ವಸತಿ ಯೋಜನೆಯಡಿ ವಸತಿ ಸೌಲಭ್ಯ ಪಡೆಯದ, ಸ್ವಂತ ನಿವೇಶನ ಹೊಂದಿರುವ ಅರ್ಹ ವೃತ್ತಿನಿರತ ವಸತಿ ರಹಿತ ನೇಕಾರರಿಂದ ವಸತಿ ಕಾರ್ಯಾಗಾರ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅರ್ಹ ಫಲಾನುಭವಿಗಳು ಕಚೇರಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆದು ಜೊತೆಗೆ ಇತ್ತೀಚಿನ ಫೋಟೋ/ ಭಾವಚಿತ್ರ, ನಿವೇಶನದ ದಾಖಲಾತಿಗಳು, ಖಾತಾ ಪ್ರತಿ/ ಹಕ್ಕುಪತ್ರ/ಮಂಜೂರಾತಿ ಪತ್ರ/ ನೊಂದಾವಣೆ ಪ್ರತಿ, ಸ್ಥಳೀಯ ಪ್ರಾಧಿಕಾರದಿಂದ ಪಡೆದ ಕಟ್ಟಡದ ಲೈಸನ್ಸ್ /ಪರವಾನಗಿ, ಸ್ಥಳೀಯ ಪ್ರಾಧಿಕಾರ ಗ್ರಾಮ ಪಂಚಾಯತ್ / ನಗರ ಸಭೆ/ಪುರಸಭೆ ವತಿಯಿಂದ ನೀಡಿದ ನಿರಪೇಕ್ಷಣಾ ಪತ್ರದ ದಾಖಲಾತಿಗಳೊಂದಿಗೆ  ನವೆಂಬರ್ 02 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.

ಫಲಾನುಭವಿಗಳು ವಸತಿ ರಹಿತ ನೇಕಾರರಾಗಿರಬೇಕು, ಫಲಾನುಭವಿಯು ವೃತ್ತಿನಿರತ/ ನೇಯ್ಗೆ ಚಟುವಟಕಗಳಲ್ಲಿ ಕಾರ್ಯನಿರತರಾಗಿರಬೇಕು, ನೇಯ್ಗೆ ಚಟುವಟಿಕೆಗಳಿಂದ ಕನಿಷ್ಠ ಶೇಕಡ 50 ರಷ್ಟು ವಾರ್ಷಿಕ ಆದಾಯ ಹೊಂದಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮತ್ತು ಜಿಲ್ಲಾ ವಲಯ ಯೋಜನೆಗಳಡಿ ಯಾವುದೇ ಇಲಾಖೆ ಅಥವಾ ಕಾರ್ಯಕ್ರಮಗಳಲ್ಲಿ ವಸತಿ ಸೌಲಭ್ಯವನ್ನು ಈ ಹಿಂದೆ ಪಡೆದಿರಬಾರದು, ವಸತಿ ರಹಿತ ನೇಕಾರರಾಗಿರಬೇಕು, ಸರ್ಕಾರದ ಯಾವುದೇ ಯೋಜನೆಗಳಡಿ ಪತಿ ಅಥವಾ ಪತ್ನಿಯ ಹೆಸರಲ್ಲಿ ಇಂತಹ ಸೌಲಭ್ಯ ಪಡೆದಿರಬಾರದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಸದಸ್ಯರಿಗೆ ಗಂಡ ಅಥವಾ ಹೆಂಡತಿ ಹೆಸರಿನಲ್ಲಿ ಒಂದು ಮನೆಗೆ ಮಾತ್ರ ಈ ಸೌಲಭ್ಯ ಅನ್ವಯಿಸತಕದ್ದು, ನೇಕಾರಿಕೆ ವೃತ್ತಿ ಅವಲಂಭಿಸಿರುವ ಫಲಾನುಭವಿಯು ಕನಿಷ್ಟ 18 ವರ್ಷ ವಯೋಮಿತಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯ ಸಮಯದಲ್ಲಿ ಖುದ್ದು ಬೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

15 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

17 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

18 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

22 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

24 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago