ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕವನ್ನು 28-02-2026 ರವರೆಗೆ ವಿಸ್ತರಿಸಲಾಗಿದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

7 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago