ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ 10-02-2026 ರೊಳಗಾಗಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

4 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

5 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

6 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

16 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

17 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

17 hours ago