ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ 10-02-2026 ರೊಳಗಾಗಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

16 minutes ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 hour ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

13 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

13 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

13 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

21 hours ago