ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ. ಪಂ ಗೆ 75 ವಿವಿಧ ಜಾತಿಯ ಸಸಿ ವಿತರಣೆ- ತಾ.ಪಂ‌ ಇಒ ಎನ್.ಮುನಿರಾಜು

77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ವಸುಧಾ ವಂದನ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ತಿಳಿಸಿದರು.

ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಭಾಗವಾಗಿ ರಾಷ್ಟ್ರಧ್ವಜ ವಿತರಣೆ, ಪಂಚಪ್ರಾಣ ಪ್ರತಿಜ್ಞಾವಿಧಿ ಬೋಧನೆ, ಪ್ರತೀ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಣೆ, ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ, ಅಮೃತ ಸರೋವರ ಅಂಗಳದಲ್ಲಿ ಧ್ವಜಾರೋಹಣ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವುದಕ್ಕಾಗಿ ಶಿಲಾಫಲಕ ಅನಾವರಣ ಹೀಗೆ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಇಂದು ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು. ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರತೀ ಗ್ರಾಮ ಪಂಚಾಯಿತಿಗೆ 75 ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗಿದ್ದು, ವಸುಧಾ ವಂದನ್ ಕಾರ್ಯಕ್ರಮದಡಿ ಸಸಿಗಳನ್ನು ನೆಡಲಾಯಿತು.

ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯ ಧ್ವಜಾರೋಹಣ ಹಾಗೂ ಶಿಲಾಫಲಕ ಅನಾವರಣಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

3 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

10 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago