ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ. ಪಂ ಗೆ 75 ವಿವಿಧ ಜಾತಿಯ ಸಸಿ ವಿತರಣೆ- ತಾ.ಪಂ‌ ಇಒ ಎನ್.ಮುನಿರಾಜು

77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ವಸುಧಾ ವಂದನ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ತಿಳಿಸಿದರು.

ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಭಾಗವಾಗಿ ರಾಷ್ಟ್ರಧ್ವಜ ವಿತರಣೆ, ಪಂಚಪ್ರಾಣ ಪ್ರತಿಜ್ಞಾವಿಧಿ ಬೋಧನೆ, ಪ್ರತೀ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಣೆ, ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ, ಅಮೃತ ಸರೋವರ ಅಂಗಳದಲ್ಲಿ ಧ್ವಜಾರೋಹಣ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವುದಕ್ಕಾಗಿ ಶಿಲಾಫಲಕ ಅನಾವರಣ ಹೀಗೆ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಇಂದು ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು. ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರತೀ ಗ್ರಾಮ ಪಂಚಾಯಿತಿಗೆ 75 ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗಿದ್ದು, ವಸುಧಾ ವಂದನ್ ಕಾರ್ಯಕ್ರಮದಡಿ ಸಸಿಗಳನ್ನು ನೆಡಲಾಯಿತು.

ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯ ಧ್ವಜಾರೋಹಣ ಹಾಗೂ ಶಿಲಾಫಲಕ ಅನಾವರಣಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago