Categories: ಐಪಿಎಲ್

ವಾಂಖೆಡೆಯಲ್ಲಿ ಚೆನ್ನೈ ಪಾರಮ್ಯ, ಏಳು ವಿಕೆಟ್‌ಗಳ ಜಯ

ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್‌ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್‌ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.

ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ವೇಗಕ್ಕೆ ಕಡಿವಾಣ ಹಾಕಿದ ಆಲ್ ರೌಂಡರ್ ರವೀಂದ್ರ ಜಡೇಜಾ ಮೂರು ವಿಕೆಟ್, ಸ್ಪಿನ್ನರ್ ಸ್ಯಾಂಟ್ನರ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಮೇಲುಗೈ ಸಾಧಿಸಿದರು.

ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.

ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.

ಅತ್ಯುತ್ತಮವಾಗಿ ಬೌಲಿಂಗ್ ಹಾಗೂ ಫೀಲ್ಡಿಂಗ್ ವಿಭಾಗದಲ್ಲಿ ಮಿಂಚಿದ ಆಲ್ ರೌಂಡರ್ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

17 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago