ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…