ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…