ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…