ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…