ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…