ವಾಘ್ ಬಕ್ರಿ ಟೀ ಗ್ರೂಪ್ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ (49) ಬೀದಿನಾಯಿಗಳ ದಾಳಿಗೆ ತುತ್ತಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರ ಅಹಮದಾಬಾದ್ನಲ್ಲಿರುವ ತಮ್ಮ ನಿವಾಸದ ಬಳಿ ಬೀದಿ ನಾಯಿಗಳ ದಾಳಿಗೆ ಸಿಲುಕಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ದೇಸಾಯಿ ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನಪ್ಪಿದ್ದಾರೆ ಎನ್ನಲಾಗಿದೆ.
“ನಮ್ಮ ಪ್ರೀತಿಯ ಪರಾಗ್ ದೇಸಾಯಿ ಅವರ ದುಃಖದ ನಿಧನವನ್ನು ತೀವ್ರ ದುಃಖದಿಂದ ತಿಳಿಸಲು ನಾವು ವಿಷಾದಿಸುತ್ತೇವೆ” ಎಂದು ಕಂಪನಿಯು ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.
ಅದೇ ರೀತಿ ಪರಾಗ್ ದೇಸಾಯಿ ಅವರ ಸಾವಿಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಗುಜರಾತ್ ಕಾಂಗ್ರೆಸ್ ನಾಯಕ ಶಕ್ತಿ ಸಿನ್ ಗೋಹಿಲ್ , ‘ಇದು ತುಂಬ ದುಃಖದ ಸುದ್ದಿಯಾಗಿದೆ. ಮೆದುಳು ರಕ್ತಸ್ರಾವದಿಂದ ವಾಫ್ ಬಕ್ರಿ ಟೀ ಗ್ರೂಪ್ನ ಮಾಲೀಕ ಮತ್ತು ನಿರ್ದೇಶಕ ಪರಾಗ್ ದೇಸಾಯಿ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…