ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.
ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.
ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…