ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.

ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.

ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago