ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.

ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.

ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

4 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

6 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

13 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

13 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

16 hours ago