ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.
ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.
ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…