ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.

ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.

ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

14 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

14 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

15 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

16 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

19 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

19 hours ago