ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.

ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.

ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

8 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

12 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

14 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

16 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

19 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago