ವಾಣಿಜ್ಯ ಕಟ್ಟಡಗಳ ತೆರಿಗೆ ವಂಚಕರಿಗೆ ಬಿಸಿ; ತೆರಿಗೆ ವಸೂಲಾತಿಗೆ ಪೌರಾಯುಕ್ತ ಶಿವಶಂಕರ್ ದಿಢೀರ್ ಕಾರ್ಯಾಚರಣೆ

ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ತೆರಿಗೆ ವಸೂಲಾತಿಯ ಕುರಿತು ನಗರಸಭೆ ಪೌರಾಯುಕ್ತ ಶಿವಶಂಕರ್ ಹಾಗೂ ಕಂದಾಯ ವಿಭಾಗದ ಸಿಬ್ಬಂದಿಗಳು ಖುದ್ದು ಕಟ್ಟಡಗಳ ಅಳತೆ ಪಡೆದು, ಬಾಕಿ ತೆರಿಗೆ ಮೊತ್ತಗಳ ಪರಿಶೀಲನೆ ಮಾಡಿದರು.

ಇದೇ ವೇಳೆ ತೆರಿಗೆ ಪಾವತಿಸಿದ್ದಲ್ಲಿ ವ್ಯತ್ಯಾಸದ ತೆರಿಗೆಯನ್ನು ಪಾವತಿಸಲು ಹಾಗೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರುಗಳಿಗೆ ತೆರಿಗೆ ಮೊತ್ತವನ್ನು ಶೀಘ್ರವಾಗಿ ಪಾವತಿ ಮಾಡುವಂತೆ ನೋಟಿಸ್ ನೀಡಲಾಯಿತು. ನಿಗದಿತ ಅವಧಿಯಲ್ಲಿ ನಗರಸಭೆಗೆ ಪಾವತಿಸಬೇಕಾದ ತೆರಿಗೆಗಳನ್ನು ಪಾವತಿಸಿ ಸರ್ಕಾರದಿಂದ ನೀಡಲಾಗುವ ತೆರಿಗೆ ರಿಯಾಯಿತಿಯ ಲಾಭಗಳನ್ನು ಪಡೆದುಕೊಳ್ಳಲು ಮನವರಿಕೆ ಮಾಡಲಾಯಿತು.

ಸ್ವತ್ತಿನ ಎಲ್ಲ ತೆರಿಗೆಗಳನ್ನು ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಒಟ್ಟು ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿ ಇರುವ ಬಗ್ಗೆ ಹಾಗೂ ಅದೇ ಆರ್ಥಿಕ ವರ್ಷದ ಮೇ ಮತ್ತು ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದಲ್ಲಿ ಯಾವುದೇ ದಂಡರಹಿತ ತೆರಿಗೆ ಪಾವತಿಸಲು ಅವಕಾಶ ಇರುವ ಬಗ್ಗೆ ತಿಳುವಳಿಕೆ ನೀಡಲಾಯಿತು. ನಿಗದಿತ ಅವಧಿಯಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸ್ವತ್ತುಗಳ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಇನ್ನುಳಿದ ತೆರಿಗೆಗಳನ್ನು ನಗರಸಭೆಗೆ ಪಾವತಿಸಿ ರಶೀದಿ ಪಡೆದುಕೊಳ್ಳಲು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಕಮರ್ಷಿಯಲ್ ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕರಿಗೆ ಅಂಗಡಿಗಳ ಬಳಿಗೆ ತೆರಳಿ ಬಾಕಿ ಮೊತ್ತಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ವರ್ಷಾನುಗಟ್ಟಲೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದ್ದೇವೆ. ಅಲ್ಲದೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ನಮ್ಮ ಕಂದಾಯ ಇಲಾಖಾ ಸಿಬ್ಬಂದಿ ಅರಿವು ಮೂಡಿಸಿದ್ದಾರೆ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಬ್ಬರು ಪಾವತಿಸಿ ನಗರಸಭೆಗೆ ಸ್ಪಂದಿಸಬೇಕಾಗಿದೆ ಎಂದು ಪೌರಾಯುಕ್ತ ಶಿವಶಂಕರ್ ಸೂಚಿಸಿದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

56 minutes ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

5 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

18 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

21 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

22 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

24 hours ago