ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ ಬೀಗ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬುಧವಾರ ನಗರದ ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ಸಿಲಿಂಡರ್ ಗಳು ಇಲ್ಲದೆ ಸೌದೆ ಒಲೆ ಮೊರೆಹೋಗಿದ್ದರು. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೂ ಸಿಲಿಂಡರ್ ಭೀತಿ ಎದುರಾಗಿದ್ದು, ಸೌದೆಗಳ ಸಂಗ್ರಹಕ್ಕೆ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಇತ್ತ ಸರ್ಕಾರಿ ಶಾಲೆಗಳಲ್ಲೂ ಬಿಸಿಯೂಟಕ್ಕೂ ಸಮಸ್ಯೆ ಎದುರಾಗುವ ಆತಂಕ ಕಾಣುತ್ತಿದೆ.

ಪ್ರತಿನಿತ್ಯ 400-500 ಸಿಲಿಂಡರ್ ಗಳ ಬೇಡಿಕೆ

ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳು, ಟೀ, ಕಾಫಿ ಅಂಗಡಿಗಳು ಸೇರಿ ಪ್ರತಿ ನಿತ್ಯ ಅಂದಾಜು 400  ರಿಂದ 500 ಕ್ಕೂ ಹೆಚ್ಚು ವಾಣಿಜ್ಯ ಸಿಲಿಂಡರ್ ಬೇಡಿಕೆ ಇದೆ. ಈಗಾಗಲೇ ಕೆಲವು ಹೋಟೆಲ್‌ಗಳು ಸಿಲಿಂಡರ್ ಹೊಂದಿಸಲಾಗದೆ ಬಾಗಿಲು ಮುಚ್ಚುತ್ತಿದ್ದು, ಬುಧವಾರ ನಗರದ ಹಲವಾರು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸೌದೆ ಒಲೆಯಲ್ಲಿ ಅಡುಗೆ ಮಾಡಿ, ಗ್ರಾಹಕರಿಗೆ ಊಟ ಒದಗಿಸುತ್ತಿದ್ದಾರೆ. ಕೆಲವು ಹೋಟೆಲ್ ಗಳಲ್ಲಿ ಈಗಾಗಲೇ ಹೊಂದಿರುವ ವಾಣಿಜ್ಯ ಸಿಲಿಂಡರ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಖಾಲಿಯಾದ ಬಳಿಕ ಬೀಗ ಹಾಕುವ ಪರಿಸ್ಥಿತಿ ಎದುರಾಗುವ ಆತಂಕ ಹೋಟೆಲ್ ಮಾಲೀಕರಿಗೆ ಎದುರಾಗಿದೆ.

ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು:

ನಗರದ ಪ್ರಮುಖ ಗ್ಯಾಸ್ ಏಜೆನ್ಸಿಯಾದ ಮಂಜುನಾಥ ಏಜೆನ್ಸಿಗೆ ಕಳೆದ ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್ ಗಳು ಬಂದಿಲ್ಲ. ಹೀಗಾಗಿ ಪ್ರತಿನಿತ್ಯ ಇಲ್ಲಿಂದ ಸರಬರಾಜು ಆಗುತ್ತಿದ್ದ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಹೋಟೆಲ್ ಮಾಲೀಕರುಗಳು ಕಂಗಾಲಾಗಿದ್ದಾರೆ. ಕನಿಷ್ಟ ನಿತ್ಯವೂ 150 ಸಿಲಿಂಡರ್ ಗಳು ಬೇಡಿಕೆ ಇದ್ದು ಪೂರೈಕೆ ಇಲ್ಲದೆ ಕೈಕಟ್ಟಿ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಘಾಟಿಯಲ್ಲಿ ಸೌದೆಗಳ ಸಂಗ್ರಹಕ್ಕೆ ಸಿದ್ಧತೆ:

ಕ್ಷೇತ್ರದ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಸಿಲಿಂಡರ್ ಗಳ ಅಭಾವ ಎದುರಾಗಿದೆ. ಈ ಕುರಿತು ಘಾಟಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಮಾಹಿತಿ ನೀಡಿದ್ದು, ಎಂದಿನಂತೆ ಸಿಲಿಂಡರ್ ಗಳ ಇಂಡೆಂಟ್ ಕಳಿಸಿದ್ದೇವೆ. ಆದರೆ ಪೂರೈಕೆಯಲ್ಲಿ ವ್ಯತ್ಯಯವಾದರೆ ಸೌದೆಗಳ ಮೂಲಕ ಬೆಳಗ್ಗಿನ ಮತ್ತು ಮಧ್ಯಾಹ್ನದ ಪ್ರಸಾದ ತಯಾರಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

23 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago