ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

9 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

10 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

11 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

12 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

21 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago