ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago