ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago