ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

5 minutes ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

10 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

13 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

18 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

18 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

19 hours ago