ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

8 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

18 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

19 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

20 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

22 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

1 day ago