ವಾಯುಭಾರ ಕುಸಿತ: ನ. 29 ರಿಂದ ಡಿ. 02 ರವರೆಗೆ ಗಾಳಿ ಸಹಿತ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್. 29 ರಿಂದ ಡಿಸೆಂಬರ್. 02 ರ ವರೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ.

*ಸಾರ್ವಜನಿಕರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮ*

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬೇಡಿ.

ನೀರು ಇರುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ಷ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಮೇಲಿನ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ನೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ. 080-28388005, ಅರಣ್ಯ ಇಲಾಖೆ ಸಹಾಯವಾಣಿ ಸಂಖ್ಯೆ: 1926 ಹಾಗೂ ಅಗ್ನಿಶಾಮಕ ಇಲಾಖೆ ಸಹಾಯವಾಣಿ ಸಂಖ್ಯೆ: 080-27681101 ಗೆ ಅಥವಾ ಆಯಾ ತಾಲ್ಲೂಕು ತಹಶೀಲ್ದಾರ ಕಛೇರಿಗೆ ಸಂಪರ್ಕಿಸಲು ಅಪರ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

3 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

22 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago