ವಾಯುಭಾರ ಕುಸಿತ: ನ. 29 ರಿಂದ ಡಿ. 02 ರವರೆಗೆ ಗಾಳಿ ಸಹಿತ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್. 29 ರಿಂದ ಡಿಸೆಂಬರ್. 02 ರ ವರೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ.

*ಸಾರ್ವಜನಿಕರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮ*

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬೇಡಿ.

ನೀರು ಇರುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ಷ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಮೇಲಿನ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ನೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ. 080-28388005, ಅರಣ್ಯ ಇಲಾಖೆ ಸಹಾಯವಾಣಿ ಸಂಖ್ಯೆ: 1926 ಹಾಗೂ ಅಗ್ನಿಶಾಮಕ ಇಲಾಖೆ ಸಹಾಯವಾಣಿ ಸಂಖ್ಯೆ: 080-27681101 ಗೆ ಅಥವಾ ಆಯಾ ತಾಲ್ಲೂಕು ತಹಶೀಲ್ದಾರ ಕಛೇರಿಗೆ ಸಂಪರ್ಕಿಸಲು ಅಪರ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

9 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

13 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

1 day ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

1 day ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

1 day ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

2 days ago