ವಾಯುಭಾರ ಕುಸಿತ: ನ. 29 ರಿಂದ ಡಿ. 02 ರವರೆಗೆ ಗಾಳಿ ಸಹಿತ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್. 29 ರಿಂದ ಡಿಸೆಂಬರ್. 02 ರ ವರೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ.

*ಸಾರ್ವಜನಿಕರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮ*

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬೇಡಿ.

ನೀರು ಇರುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ಷ ಕಟ್ಟಡದಲ್ಲಿ ಆಶ್ರಯ ಪಡೆಯುವುದು.

ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಮೇಲಿನ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ನೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.

ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ. 080-28388005, ಅರಣ್ಯ ಇಲಾಖೆ ಸಹಾಯವಾಣಿ ಸಂಖ್ಯೆ: 1926 ಹಾಗೂ ಅಗ್ನಿಶಾಮಕ ಇಲಾಖೆ ಸಹಾಯವಾಣಿ ಸಂಖ್ಯೆ: 080-27681101 ಗೆ ಅಥವಾ ಆಯಾ ತಾಲ್ಲೂಕು ತಹಶೀಲ್ದಾರ ಕಛೇರಿಗೆ ಸಂಪರ್ಕಿಸಲು ಅಪರ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago