Categories: ಹವಾಮಾನ

ವಾಯುಭಾರ ಕುಸಿತ: ರಾಗಿ ಬೆಳೆ ಸಂರಕ್ಷಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 02 ರವರೆಗೆ 4 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯು ವಿವಿಧ ಹಂತದಲ್ಲಿದ್ದು, ಮಳೆ ಗಾಳಿ ಸಂದರ್ಭದಲ್ಲಿ ನೆಲಕುರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಬೆಳೆಯನ್ನು ಸಣ್ಣ ಸಣ್ಣ ಕಟ್ಟುಗಳಾಗಿ / ಕುಚ್ಚುಗಳಾಗಿ ಕಟ್ಟಿ ಗಾಳಿಗೆ ಬೀಳದಂತೆ ಜಾಗ್ರತೆ ವಹಿಸುವುದು. ಕಟಾವಿಗೆ ಬಂದಿರುವ ರಾಗಿಯನ್ನು 4 ರಿಂದ 5 ದಿನ ಮುಂದೂಡಿ ಕಟಾವು ಮಾಡುವುದು. ಈಗಾಗಲೇ ಕಟಾವು ಮಾಡಿದ ರಾಗಿ ಜಮೀನಿನಲ್ಲಿ ಇಟ್ಟಿದ್ದರೆ ತೇವಾಂಶವಿಲ್ಲದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಶೀಲೀಂದ್ರ ಬೆಳೆದು ಹಾಳಾಗದಂತೆ ಶೇಖರಿಸಿ ಸಂರಕ್ಷಿಸುವುದು. ಜಮೀನಿನಲ್ಲಿ ನೀರು ನಿಲ್ಲದಂತೆ ಸಣ್ಣ ಸಣ್ಣ ಕಾಲುವೆಗಳಾಗಿ ಮಾಡಿ ನೀರು ಬಸಿದು ಹೋಗುವಂತೆ ನೋಡಿಕೊಂಡು ಬೆಳೆ ನಷ್ಟವಾಗದಂತೆ ಕಾಪಾಡಿಕೊಳ್ಳುವಂತೆ ಕೃಷಿ ಇಲಾಖಾ ವತಿಯಿಂದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

17 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

18 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

2 days ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago